ಸುಕ್ಮಾ ದಾಳಿ: ಕೇಂದ್ರದ ನಕ್ಸಲ್ ವಿರೋಧಿ ತಂತ್ರ ವಿರುದ್ಧ ರಾಹುಲ್ ಗಾಂಧಿ ಕಿಡಿ

ಸುಕ್ಮಾ ದಾಳಿಗೆ ಕಾಂಗ್ರೆಸ್ ಉಪಾಧ್ಯಕ್ಷ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಕೇಂದ್ರದ ನಕ್ಸಲ್ ವಿರೋಧಿ ತಂತ್ರದ ವಿರುದ್ಧ ಕಿಡಿಕಾರಿದ್ದಾರೆ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
Updated on
ನವದೆಹಲಿ: ಸುಕ್ಮಾ ದಾಳಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಕೇಂದ್ರದ ನಕ್ಸಲ್ ವಿರೋಧಿ ತಂತ್ರದ ವಿರುದ್ಧ ಕಿಡಿಕಾರಿದ್ದಾರೆ.
ಸುಕ್ಮಾ ನಕ್ಸಲ್ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಈ ಹಿಂದೆ ಕೇಂದ್ರ ಸರ್ಕಾರ ನಕ್ಸಲರನ್ನು ಹಾಗೂ ಅವರ ಕಾರ್ಯ ಚಟುವಟಿಕೆಗಳನ್ನು ಬಗ್ಗುಬಡೆಯಲು ರೂ.500 ಹಾಗೂ 1,000 ದುಬಾರಿ ನೋಟುಗಳ ಮೇಲೆ ನಿಷೇಧ ಹೇರಿತ್ತೆಂದು ಕೇಳಿದ್ದೆ. ಇದೀಗ ಎಡಪಂಥೀಯ ಉಗ್ರಗಾಮಿಗಳ ವಿರುದ್ಧ ತಂತ್ರವನ್ನು ರೂಪಿಸಿದೆ. ಈ ತಂತ್ರ ಪರಿಣಾಮಕಾರಿಯಾಗಲಿದೆ ಎಂದು ನಂಬಿದ್ದೇನೆಂದು ಹೇಳಿದ್ದಾರೆ. 
ಛತ್ತೀಸ್ಗಢ ರಾಜ್ಯದ ಸುಕ್ಮಾದ ರಸ್ತೆಯೊಂದರಲ್ಲಿ ಕಾರ್ಮಿಕರು ಕಾಮಗಾರಿ ಕಾರ್ಯವನ್ನು ಮಾಡುತ್ತಿದ್ದರು ಈ ವೇಳೆ 150ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಕಾರ್ಮಿಕರಿಗೆ ಭದ್ರತೆಯನ್ನು ಒದಗಿಸುತ್ತಿದ್ದರೆ. ಈ ವೇಳೆ ಸ್ಥಳಕ್ಕೆ ಬಂದ 300ಕ್ಕೂ ಹೆಚ್ಚು ನಕ್ಸಲರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 25 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com