ಕುಪ್ವಾರ: ಉಗ್ರರ ದಾಳಿ ಬಳಿಕ ಸೇನಾ ಶಿಬಿರದ ಬಳಿ ಕಲ್ಲು ತೂರಾಟ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಸೇನಾ ಶಿಬಿರ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಸೇನಾ ನೆಲೆ ಬಳಿ ಬಂದಿರುವ ಗುಂಪೊಂದು ಏಕಾಏಕಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆಂದು ಗುರುವಾರ ತಿಳಿದುಬಂದಿದೆ...
ಕುಪ್ವಾರ: ಉಗ್ರರ ದಾಳಿ ಬಳಿಕ ಸೇನಾ ಶಿಬಿರದ ಬಳಿ ಕಲ್ಲು ತೂರಾಟ
ಕುಪ್ವಾರ: ಉಗ್ರರ ದಾಳಿ ಬಳಿಕ ಸೇನಾ ಶಿಬಿರದ ಬಳಿ ಕಲ್ಲು ತೂರಾಟ
ಕುಪ್ವಾರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಸೇನಾ ಶಿಬಿರ ಮೇಲೆ ಗುರುವಾರ ಉಗ್ರರು ದಾಳಿ ನಡೆಸಿದ ಬಳಿಕ ಸೇನಾ ನೆಲೆ ಬಳಿ ಬಂದಿರುವ ಗುಂಪೊಂದು ಏಕಾಏಕಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 
ಕುಪ್ವಾರ ಸೇನಾ ಶಿಬಿರದ ಮೇಲೆ ಇಂದು ಬೆಳಗ್ಗೆ ದಾಳಿ ಮಾಡಿದ್ದ ಉಗ್ರರು ಮೂವರು ಯೋಧರನ್ನು ಬಲಿತೆಗೆದುಕೊಂಡಿದ್ದರು. ಉಗ್ರ ದಾಳಿಗೆ ದಿಟ್ಟ ಉತ್ತರ ನೀಡಿದ್ದ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿತ್ತು. ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಸೇನಾ ಪಡೆ ಕಾರ್ಯಾಚರಣೆಯನ್ನು ಆರಂಭಿಸಿತ್ತು. 
ಈ ವೇಳೆ ಸ್ಥಳಕ್ಕೆ ಬಂದಿರುವ ಗುಂಪೊಂದು ಏಕಾಏಕಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಈ ಮೂಲಕ ಸೇನೆಯ ಕಾರ್ಯಾಚರಣೆಗೆ ಅಡ್ಡಿ ಮಾಡಲು ಪ್ರಯತ್ನಿಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com