ಶ್ರೀ ರವಿಶಂಕರ್ ಗುರೂಜಿ ವಿರುದ್ಧ ನಿಂದನೆ ನೋಟೀಸ್ ನೀಡಿದ ಎನ್ ಜಿಟಿ

ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಅವರ ವಿರುದ್ಧ ರಾಷ್ಟ್ರೀಯ ಹಸಿರು ಮಂಡಳಿಯು ನಿಂದನೆ ನೋಟೀಸ್ ..
ಶ್ರೀ ರವಿಶಂಕರ್ ಗುರೂಜಿ
ಶ್ರೀ ರವಿಶಂಕರ್ ಗುರೂಜಿ
ನವದೆಹಲಿ: ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಅವರ ವಿರುದ್ಧ ರಾಷ್ಟ್ರೀಯ ಹಸಿರು ಮಂಡಳಿ ನಿಂದನೆ ನೋಟೀಸ್ ನೀಡಿದೆ.
ಯಮುನಾ ನದಿ ತೀರದಲ್ಲಿ ಪರಿಸರಕ್ಕೆ ಹಾನಿಯಾಗಲು, ಅಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯೇ ಕಾರಣ ಎಂದು ಶ್ರೀ ರವಿಶಂಕರ್ ಗುರೂಜಿ ಆರೋಪಿಸಿದ್ದರು. 
ಎನ್ ಜಿಟಿ ಅಧ್ಯಕ್ಷ ಜಸ್ಟೀಸ್ ಸ್ವತಂತ್ರ್ಯ ಕುಮಾರ್ ಅವರನ್ನೊಳಗೊಂಡ ಪೀಠ ಮೇ 9 ರೊಳಗೆ ಪ್ರತಿಕ್ರಿಯೆ ನೀಡುವಂತೆ ರವಿಶಂಕರ್ ಗುರೂಜಿ ಅವರಿಗೆ ನೋಟಿಸ್ ನೀಡಿದೆ.
ಆರ್ಟ್ ಆಫ್ ಲಿವಿಂಗ್ ವೆಬ್ ಸೈಟ್ ನಲ್ಲಿ ಕೇಂದ್ರ ಸರ್ಕಾರ ಮತ್ತು ಎನ್ ಜಿಟಿ ಯನ್ನು ರವಿಶಂಕರ್ ಗುರೂಜಿ ನಿಂದಿಸಿದ್ದ ಕಾರಣ ರವಿಶಂಕರ್ ಗುರೂಜಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತ ಮನೋಜ್ ಮಿಶ್ರಾ ಎಂಬುವರು ದೂರು ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com