ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದು, ಉತ್ತರ ಪ್ರದೇಶದ ಮಾದರಿಯಲ್ಲೇ ಮಹಾತ್ಮರ ಜನ್ಮದಿನಾಚರಣೆಗೆ ನೀಡಲಾಗುವ ರಜೆ ರದ್ದು ಮಾಡಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.
ಉತ್ತರ ಪ್ರದೇಶದಿಂದ ಪ್ರೇರಣೆಗೊಂಡಿದ್ದು, ಮಹಾತ್ಮರ ಜನ್ಮ ದಿನಾಚರಣೆಯ ದಿನದಂದು ಶಾಲಾ ಕಾಲೇಜುಗಳಿಗೆ ರಜೆ ನೀಡದೇ ಇರುವ ತೀರ್ಮಾನ ಕೈಗೊಳ್ಳಲಾಗಿದೆ. ರಜೆ ರದ್ದುಗೊಳಿಸುವ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶ ಈ ವಿಷಯದಲ್ಲಿ ಉತ್ತಮ ನಿರ್ಧಾರ ಕೈಗೊಂಡಿದೆ. ಬೇರೆ ರಾಜ್ಯಗಳ ಒಳ್ಳೆಯ ನಿರ್ಧಾರಗಳಿಂದ ಕಲಿಯಲು ನಾವು ಸದಾ ಸಿದ್ಧರಿರಬೇಕು ಎಂದು ಸಿಸೋಡಿಯಾ ಟ್ವೀಟ್ ನಲ್ಲಿ ಹೇಳಿದ್ದಾರೆ.