ಆಂಧ್ರ ಪ್ರದೇಶದಲ್ಲಿ ದೋಣಿ ದುರಂತ: 8 ಮಂದಿ ಸಾವು, 5 ಮಂದಿ ನಾಪತ್ತೆ!

ಆಂಧ್ರ ಪ್ರದೇಶದ ಅನಂತಪುರದಲ್ಲಿ ಭೀಕರ ದೋಣಿ ದುರಂತ ಸಂಭವಿಸಿದ್ದು, ದೋಣಿಯಲ್ಲಿದ್ದ 15 ಮಂದಿಯ ಪೈಕಿ 13 ಮಂದಿ ನೀರಿನಲ್ಲಿ ಮುಳುಗಿರುವ ಘಟನೆ ಶನಿವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಅನಂತಪುರ: ಆಂಧ್ರ ಪ್ರದೇಶದ ಅನಂತಪುರದಲ್ಲಿ ಭೀಕರ ದೋಣಿ ದುರಂತ ಸಂಭವಿಸಿದ್ದು, ದೋಣಿಯಲ್ಲಿದ್ದ 15 ಮಂದಿಯ ಪೈಕಿ 13 ಮಂದಿ ನೀರಿನಲ್ಲಿ ಮುಳುಗಿರುವ ಘಟನೆ ಶನಿವಾರ ನಡೆದಿದೆ.

ಅನಂತಪುರದ ಗುಂಟಕಲ್ ನಲ್ಲಿರುವ ಯೆರ್ರ ತಿಮ್ಮರಾಜು ಕೆರೆಯಲ್ಲಿ ದೋಣಿ ಮುಳುಗಡೆಯಾಗಿದ್ದು, ದೋಣಿಯಲ್ಲಿ ಸುಮಾರು 15 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ, ಈ ಪೈಕಿ 13 ಮಂದಿ ಮುಳುಗಡೆಯಾಗಿದ್ದು,  ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭರದಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ವರೆಗೂ 8 ಮಂದಿಯ ಶವಗಳನ್ನು ಹೊರಕ್ಕೆ ತೆಗೆಯಲಾಗಿದ್ದು, ಉಳಿದ 5 ಮಂದಿಗಾಗಿ  ತೀವ್ರ ಶೋಧ ನಡೆಸಲಾಗುತ್ತಿದೆ.

15 ಮಂದಿ ಪ್ರಯಾಣಿಕರ ಪೈಕಿ 6 ಮಂದಿ ಮಕ್ಕಳು ಮತ್ತು 5 ಮಂದಿ ಮಹಿಳೆಯರೂ ಇದ್ದರು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಚಂದ್ರಬಾಬು ನಾಯ್ಡು ಅವರು ಆಘಾತ ವ್ಯಕ್ತಪಡಿಸಿದ್ದು, ಪ್ರಕರಣ ಸಂಬಂಧ  ತನಿಖೆಗೆ ಆದೇಶ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com