ಕಳೆದ ಡಿಸೆಂಬರ್ 2016ರಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಶ್ ಎಂಬುವವರನ್ನು ಹರಿಯಾಣ ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯನ್ನು ಇಂದು ವಿಚಾರಣೆಗಾಗಿ ರೋಹಿಣಿ ಕೋರ್ಟ್ ಗೆ ಕರೆತರಲಾಗಿತ್ತು. ಈ ವೇಳೆ ದುಷ್ಕರ್ಮಿಯೊಬ್ಬ ರಾಜೇಶ್ ಮೇಲೆ ಗುಂಡು ಹಾರಿಸಿದ್ದು, ವಿಚಾರಣಾಧೀನ ಕೈದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.