ದೆಹಲಿಯಲ್ಲಿ ಗುಂಪು ಘರ್ಷಣೆ: 3 ಸಾವು, ಓರ್ವ ಪೇದೆಗೆ ಗಾಯ

ದೆಹಲಿಯ ಮಿಯಾನ್ ವಾಲಿ ಪ್ರದೇಶದಲ್ಲಿ ಗುಂಪು ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡು, ಓರ್ವ ಪೊಲೀಸ್ ಪೇದೆಗೆ ಗಾಯವಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ...
ಘಟನಾ ಸ್ಥಳದಲ್ಲಿ ಪೊಲೀಸರು
ಘಟನಾ ಸ್ಥಳದಲ್ಲಿ ಪೊಲೀಸರು
Updated on
ನವದೆಹಲಿ: ದೆಹಲಿಯ ಮಿಯಾನ್ ವಾಲಿ ಪ್ರದೇಶದಲ್ಲಿ ಗುಂಪು ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡು, ಓರ್ವ ಪೊಲೀಸ್ ಪೇದೆಗೆ ಗಾಯವಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. 
ಭುಪೇಂದ್ರ ಎಂಬಾತನ ವಿರುದ್ಧ ಹಲವು ಕ್ರಿಮಿನಲ್ ಕೇಸ್ ಗಳು ದಾಖಲಾಗಿದ್ದು, ಈತ ತನ್ನ ಗೆಳೆಯ ಅರ್ಜುನ್, ಭದ್ರತಾಧಿಕಾರಿ ವಿಜಯ್ ಹಾಗೂ ಪೇದೆ ಕುಲ್ದೀಪ್ ಎಂಬುವವರ ಜೊತೆಯಲ್ಲಿ ಕಾರಿನಲ್ಲಿ ಕುಳಿತಿದ್ದ. ರಾತ್ರಿ 11.15ರ ಸುಮಾರಿಗೆ ಕೆಲ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. 
ಪರಿಣಾಮ ಭುಪೇಂದ್ರ, ಅರ್ಜುನ್ ಮತ್ತು ವಿಜಯ್ ಎಂಬುವವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪೇದೆ ಕುಲ್ದೀಪ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com