ಅಕೀಲ್ ಅಹ್ಮದ್ ಭಟ್ ಸಾವನ್ನಪ್ಪಿದ್ದ ನಾಗರೀಕರನಾಗಿದ್ದು, ಈತ ಪುಲ್ವಾಮ ಜಿಲ್ಲೆಯ ಗಬರ್ಪೊರ ಪ್ರದೇಶದ ನಿವಾಸಿಯಾಗಿದ್ದಾನೆ. ನಿನ್ನೆ ಸೇನೆ ಎನ್ ಕೌಂಟರ್ ನಡೆಸುತ್ತಿದ್ದ ವೇಳೆ ಕೆಲ ಸ್ಥಳೀಯರು ಕಲ್ಲು ತೂರಾಟ ನಡೆಸುತ್ತಿದ್ದರು. ಈ ವೇಳೆ ಕಲ್ಲು ತೂರಾಟಗಾರರನ್ನು ಚದುರಿಸುವ ಸಲುವಾಗಿ ಸೇನಾ ಪಡೆ ಪೆಲೆಟ್ ಗನ್ ಬಳಕೆ ಮಾಡಿತ್ತು. ಸ್ಥಳದಲ್ಲಿದ್ದ ಅಕೀಲ್ ಅಹ್ಮದ್ ಭಟ್ ಗಂಭೀರವಾಗಿ ಗಾಯಗೊಂಡಿದ್ದ.