ಉಗ್ರ ಅಬು ದುಜಾನಾ ಹತ್ಯೆ ಕುರಿತಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಕಾಶ್ಮೀರ ಐಜಿಪಿ ಮುನೀರ್ ಖಾನ್ ಅವರು, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಿನ್ನೆ ನಡೆಸಲಾದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮೂಲಕ ಅಬು ದುಜಾನಾನನ್ನು ಹತ್ಯೆ ಮಾಡಲಾಗಿತ್ತು. ಅಬು ದುಜಾನಾ ಗಿಲ್ಗಿಟ್-ಬಲ್ಟಿಸ್ತಾನ್'ಗೆ ಸೇರಿದವನಾಗಿದ್ದಾನೆ. ಹೀಗಾಗಿ ಈತನ ಶವವನ್ನು ತಮ್ಮದೆಂದು ಘೋಷಿಸಿ ಮೃತದೇಹವನ್ನು ತೆಗೆದುಕೊಂಡು ಹೋಗುವಂತೆ ಪಾಕಿಸ್ತಾನ ರಾಯಭಾರಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.