ಅಕ್ಟೋಬರ್ 1 ರಿಂದ ಮರಣ ನೋಂದಣಿಗೆ ಆಧಾರ್ ಕಡ್ಡಾಯ!

ಗುರುತಿನ ವಂಚನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮರಣ ನೋಂದಣಿಗೂ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದ್ದು, ಅಕ್ಟೋಬರ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ.
ಆಧಾರ್ ನಂಬರ್
ಆಧಾರ್ ನಂಬರ್
Updated on
ನವದೆಹಲಿ: ಗುರುತಿನ ವಂಚನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮರಣ ನೋಂದಣಿಗೂ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದ್ದು, ಅಕ್ಟೋಬರ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ. 
ಕೇಂದ್ರ ಗೃಹ ಇಲಾಖೆ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಜಮ್ಮು-ಕಾಶ್ಮೀರ, ಅಸ್ಸಾಂ, ಮೇಘಾಲಯ ರಾಜ್ಯಗಳನ್ನು ಹೊರತುಪಡಿಸಿ ಅಕ್ಟೋಬರ್ 1 ರಿಂದ ಎಲ್ಲಾ ರಾಜ್ಯಗಳಲ್ಲೂ ನಿಯಮ ಅನ್ವಯವಾಗಲಿದೆ ಎಂದು ಹೇಳಿದೆ.ಜಮ್ಮು-ಕಾಶ್ಮೀರ, ಅಸ್ಸಾಂ, ಮೇಘಾಲಯ ರಾಜ್ಯಗಳಿಗೆ ಪ್ರತ್ಯೇಕ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಗೃಹ ಇಲಾಖೆ ತಿಳಿಸಿದೆ. 
ನಿಧನರಾದ ವ್ಯಕ್ತಿಯ ಗುರುತನ್ನು ದಾಖಲಿಸುವುದಕ್ಕಾಗಿ ಆಧಾರ್ ಸಂಖ್ಯೆಯನ್ನು ಮರಣ ನೋಂದಣಿಗೂ ಕಡ್ಡಾಯಗೊಳಿಸಲಾಗಿದ್ದು, ಅಕ್ಟೋಬರ್ 1 ರಿಂದ  ಜಾರಿಗೆ ಬರಲಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರದ ಈ ಹೊಸ ಕ್ರಮದಿಂದ ಗುರುತಿನ ವಂಚನೆಯನ್ನು ತಡೆಗಟ್ಟಲು ಸಾಧ್ಯವಿದ್ದು ಸಾವನ್ನಪ್ಪಿರುವ ವ್ಯಕ್ತಿಯ ಗುರುತನ್ನು ಸಾಬೀತುಪಡಿಸುವುದಕ್ಕೆ ಹಲವು ದಾಖಲೆಗಳನ್ನು ಒದಗಿಸುವ ಪ್ರಕ್ರಿಯೆಗಳೂ ಅಗತ್ಯವಿರುವುದಿಲ್ಲ ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com