ಕಾಂಗ್ರೆಸ್ ಮುಕ್ತ ಭಾರತ ಮಾಡುವ ಬಿಜೆಪಿ ಸಂಕಲ್ಪ ನೆರವೇರುವುದಿಲ್ಲ: ಪಿ ಚಿದಂಬರಂ

ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಕನಸು ಯಶಸ್ಸಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
ಪಿ ಚಿದಂಬರಂ
ಪಿ ಚಿದಂಬರಂ
ನವದೆಹಲಿ: ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಕನಸು ಯಶಸ್ಸಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಹೇಳಿದ್ದಾರೆ. 
ರಾಹುಲ್ ಗಾಂಧಿ ಅವರ ಮೇಲೆ ದಾಳಿ ನಡೆದಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿದಂಬರಂ, ಟ್ವಿಟರ್ ನಲ್ಲಿ  ಪ್ರತಿಕ್ರಿಯೆ ನೀಡಿದ್ದು, ರಾಹುಲ್ ಗಾಂಧಿ ಅವರ ಮೇಲೆ ನಡೆದಿರುವ ದಾಳಿಯನ್ನು ಕೇಂದ್ರ ಬಿಜೆಪಿ ನಾಯಕರೇಕೆ ಇನ್ನೂ ಖಂಡಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. 
ಸುಳ್ಳು ಆರೋಪಗಳು, ದೌರ್ಜನ್ಯ, ಪ್ರತಿಭಟನೆಯನ್ನು ಹತ್ತಿಕ್ಕುವುದು ಈಗ ಹಿಂಸಾಚಾರ, ಏನೇ ಆದರೂ ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತದ ಉದ್ದೇಶ ಯಶಸ್ವಿಯಾಗುವುದಿಲ್ಲ ಎಂದು ಪಿ ಚಿದಂಬರಂ ಹೇಳಿದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com