ಶತ್ರುಗಳೂ ಕೂಡ ಇಷ್ಟೊಂದು ಕ್ರೂರವಾಗಿರುವುದಿಲ್ಲ; ಜೇಟ್ಲಿ
ಆರ್'ಎಸ್ಎಸ್ ಕಾರ್ಯಕರ್ತ ರಾಜೇಶ್ ಕುಟುಂಬಸ್ಥರನ್ನು ಭೇಟಿಯಾದ ಬಳಿಕ ಮಾತನಾಡಿರುವ ಜೇಟ್ಲಿಯವರು, ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ ಶತ್ರುಗಳೂ ಕೂಡ ಇಷ್ಟೊಂದು ಕ್ರೂರವಾಗಿರುವುದಿಲ್ಲ ಎಂದು ಹೇಳಿದ್ದಾರೆ.
ಹತ್ಯೆಯಾದ ಕಾರ್ಯಕರ್ತನ ಕುಟುಂಬಸ್ಥರನ್ನು ಭೇಟಿ ಮಾಡಿದೆ. ಕಾರ್ಯಕರ್ತರಿಗೆ ರಾಜೇಶ್ ಒಬ್ಬ ಮಾದರಿಯಾಗಿದ್ದ. ಈ ರೀತಿಯ ಹಿಂಸಾಚಾಗಳು ಪಕ್ಷದ ಸಿದ್ದಾಂತಗಳನ್ನು ಕುಗ್ಗಿಸುವುದಿಲ್ಲ. ಕಾರ್ಯಕರ್ತರು ಇದರಿಂದ ಹೆದರುವುದೂ ಇಲ್ಲ. ಇಂತಹ ಕೃತ್ಯಗಳಲ್ಲಿ ಭಾಗಿಯಾಗುತ್ತಿರವವರ ವಿರುದ್ಧ ಹೋರಾಡಲು ಕಾರ್ಯಕರ್ತರಲ್ಲಿರುವ ಸ್ಥೈರ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.
ರಾಜೇಶ್ ಬಡ ಕುಟುಂಬಕ್ಕೆ ಸೇರಿದವನಾಗಿದ್ದ. ರಾಜೇಶ್ ನನ್ನು ಕಳೆದುಕೊಂಡ ಬಳಿಕ ಅವರ ಕುಟುಂಬದ ಜೀವನೋಪಾಯಕ್ಕೆ ಯಾವುದೇ ಆಧಾರಗಳೂ ಇಲ್ಲ. ಶತ್ರುಗಳೂ ಕೂಡ ಇಂತಹ ಕೃತ್ಯಗಳನ್ನು ಎಸಗುವುದಿಲ್ಲ. ನಿಷ್ಕರುಣಿಯಾಗಿ ಭೀಕರವಾಗಿ ರಾಜೇಶ್ ಅವರನ್ನು ಹತ್ಯೆ ಮಾಡಲಾಗಿದೆ. ದೇಹದ ಮೇಲೆ 70-80 ಇರಿತದ ಗಾಯಗಳಾಗಿವೆ. ಕೆಲ ತಿಂಗಳುಗಳಿಂದ ಪಕ್ಷದ ಅಧಿಕಾರಿಗಳ ಮೇಲೂ ದಾಳಿಗಳನ್ನು ನಡೆಸಲಾಗುತ್ತಿದೆ. ನಮ್ಮ ಕಾರ್ಯಕರ್ತರ ಮೇಲೆ ದಾಳಿ ನಡೆಸಲಾಗುತ್ತಿದೆ. ಅವರ ಮನೆಗಳಿಗೆ ಬೆಂಕಿ ಹಚ್ಚಲಾಗುತ್ತಿದೆ. ಇದು ಖಂಡನೀಯ ಎಂದು ಹೇಳಿದ್ದಾರೆ.