ಹರ್ಯಾಣ ಬಿಜೆಪಿ ಮುಖ್ಯಸ್ಥ ಸುಭಾಶ್ ಬರಲಾ ಅವರ ಪುತ್ರ ವಿಕಾಸ್ ಮತ್ತು ಆತನ ಸ್ನೇಹಿತ ಆಶಿಶ್ ಕುಮಾರ, ಹುಡುಗಿಯೊಬ್ಬಳಿಗೆ ಚುಡಾಯಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೀಡಾಗಿ ನಂತರ ಜಾಮೀನು ಮೇಲೆ ಹೊರಬಂದಿದ್ದಾರೆ. ಈ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ರಾಹುಲ್ ಗಾಂಧಿ, ಚಂಡೀಗಢದಲ್ಲಿ ಯುವತಿಯನ್ನು ಅಪಹರಿಸಿ ಕಿರುಕುಳ ನೀಡಲು ಯತ್ನಿಸಿದ ಘಟನೆಯನ್ನು ಖಂಡಿಸುತ್ತೇನೆ. ಅಪರಾಧಿಗಳಿಗೆ ಬಿಜೆಪಿ ಸರ್ಕಾರ ಶಿಕ್ಷೆ ನೀಡಬೇಕು. ಅಪರಾಧಿಗಳ ಜೊತೆ ಒಳ ಸಂಚು ರೂಪಿಸಿ ಅಂಥವರ ಮನಸ್ಥಿತಿಯನ್ನು ಒಪ್ಪಬಾರದು ಎಂದು ಟ್ವೀಟ್ ಮಾಡಿದ್ದಾರೆ.