ಪಾಕ್ ಪ್ರಾಯೋಜಿತ ಭಯೋತ್ಪಾದನೆಯಿಂದ ಕಾಶ್ಮೀರ ಮುಕ್ತಗೊಳಿಸಲು ನಿಲುವು ತಾಳಿದ್ದೇವೆ: ಜಮ್ಮು-ಕಾಶ್ಮೀರ ಪೊಲೀಸ್

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯಿಂದ ಕಾಶ್ಮೀರವನ್ನು ಮುಕ್ತಗೊಳಿಸಲು ನಿಲುವು ತಾಳಿದ್ದೇವೆಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್ ಅವರು ಸೋಮವಾರ ಹೇಳಿದ್ದಾರೆ...
ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್
ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್
Updated on
ಶ್ರೀನಗರ: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯಿಂದ ಕಾಶ್ಮೀರವನ್ನು ಮುಕ್ತಗೊಳಿಸಲು ನಿಲುವು ತಾಳಿದ್ದೇವೆಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್ ಅವರು ಸೋಮವಾರ ಹೇಳಿದ್ದಾರೆ.
ಪುಲ್ವಾಮ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 50 ಆರ್'ಆರ್, ಸಿಆರ್ ಪಿಎಫ್ ಪಡೆಗಳು ಜಂಟಿಯಾಗಿ ನಡೆಸಿದ್ದ ಕಾರ್ಯಾಚರಣೆಯಲ್ಲಿ ಓರ್ವ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರನನ್ನು ಹತ್ಯೆ ಮಾಡಿದೆ. 
ಎನ್ ಕೌಂಟರ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವೈದ್ ಅವರು, 2-3 ಉಗ್ರರು ಸಂಬೂರಾ ಪ್ರದೇಶದಲ್ಲಿ ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ನಂತರ ಅವಂತಿಪುರ ಪೊಲೀಸ್ ಹಾಗೂ ಕೇಂದ್ರೀಯ ಸಶಸ್ತ್ರ ಮೀಸಲು ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿಯಿತು. ಗುಂಡಿನ ಕಾಳಗದಲ್ಲಿ ಇಬ್ಬರಿಗೆ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. 
ಸ್ಥಳದಲ್ಲಿ ಇಬ್ಬರು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯವರಾಗಿದ್ದರು. ಮತ್ತೊಬ್ಬ ಸ್ಥಳೀಯ ಉಗ್ರನಾಗಿದ್ದು, ಸ್ಥಳದಲ್ಲಿ ಅಡಗಿ ಕುಳಿತಿದ್ದರು. ಈ ವೇಳೆ ನಡೆಸಲಾದ ಎನ್ ಕೌಂಟರ್ ನಲ್ಲಿ ಉಗ್ರ ಉಮರ್ ಎಂಬಾತನನ್ನು ಹತ್ಯೆ ಮಾಡಲಾಯಿತು ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com