ರಾತ್ರಿ 11:30 ಕ್ಕೆ ಚುನಾವಣಾ ಆಯೋಗ ಕಾಂಗ್ರೆಸ್ ಶಾಸಕರ ಮತಗಳನ್ನು ಅಸಿಂಧು ಎಂದು ಪ್ರಕಟಿಸಿದೆ. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಇಬ್ಬರು ಶಾಸಕರು ಅಡ್ಡಮತದಾನ ಮಾಡಿದ್ದರು. ಈ ಬಗ್ಗೆ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿ 2 ಶಾಸಕರ ಮತಗಳನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕಾರ್ಯ ವಿಳಂಬವಾಗಿತ್ತು.