ಚಂಡೀಗಢ: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ಹಾಗೂ ಆತನ ಸ್ನೇಹಿತ ಆಶೀಶ್ ಅವರನ್ನು ಬುಧವಾರ ಪೊಲೀಸರು ಬಂಧಿಸಿದ್ದು, ಇಬ್ಬರು ಆರೋಪಿಗಳ ವಿರುದ್ಧ ಮಹಿಳೆ ಅಪಹರಣ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.