ರಾಜ್ಯಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಗುಜರಾತ್ ವಿಧಾನಸಭೆಯಲ್ಲಿ ಚುನಾವಣಾ ಏಜೆಂಟ್ ನೇಮಕಕ್ಕೆ ಸಂಬಂಧಿಸಿದಂತೆ ರಿಟರ್ನಿಂಗ್ ಆಫೀಸರ್ ಗೆ ಬರೆದಿದ್ದಕ್ಕಾಗಿ ಕಾರ್ಯದರ್ಶಿ ಅರುಣ್ ಶ್ರೀವಾಸ್ತವ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಕ್ಷದ ಮುಖಂಡ ಕೆಸಿ ತ್ಯಾಗಿ, ಕಾರ್ಯದರ್ಶಿ ಹುದ್ದೆಯಿಂದ ಅರುಣ್ ಶ್ರೀವಾಸ್ತವ ಅವರನ್ನು ವಜಾಗೊಳಿಸಿರುವುದನ್ನು ಸ್ಪಷ್ಟಪಡಿಸಿದ್ದಾರೆ.