ಇಂದು ಜಂತರ್ ಮಂತರ್ ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ಅಹಮದ್ ಪಟೇಲ್ ಅವರು, ರಾಜ್ಯಸಭೆ ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿತ್ತು. ಆದರೂ ಗೆಲವು ಸಾಧಿಸಲಿಲ್ಲ. ಈ ವರ್ಷಾಂತ್ಯಕ್ಕೆ ನಡೆಯುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸುವುದು ಖಚಿತ ಎಂದಿದ್ದಾರೆ.