ಇತ್ತೀಚೆಗಷ್ಟೇ ಬೆಂಗಳೂರಿಗೆ ಆಗಮಿಸಿ ನ್ಯಾಷನಲ್ ಲಾ ಸ್ಕೂಲ್ ನಲ್ಲಿ ಭಾಷಣ ಮಾಡಿದ್ದ ಹಮೀದ್ ಅನ್ಸಾರಿ, ರಾಷ್ಟ್ರೀಯತೆಯನ್ನು ಅಸಹಿಷ್ಣುತೆ, ಅಹಂಕಾರದಿಂದ ಆಚರಿಸಲಾಗುತ್ತಿದೆ ಎಂದಿದ್ದರು. ಇದರ ಪರಿಣಾಮವಾಗಿ ಮುಸ್ಲಿಂ ಸಮುದಾಯದಲ್ಲಿ ಅಭದ್ರತೆಯ ಭಾವನೆ ಮೂಡುತ್ತಿದೆಯೇ ಎಂಬ ಬಗ್ಗೆ ಸಂದರ್ಶನದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಹಮೀದ್ ಅನ್ಸಾರಿ ದೇಶದಲ್ಲಿ ಅಸಹಿಷ್ಣುತೆ, ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರ ಮುಸ್ಲಿಮರಲ್ಲಿ ಅಭದ್ರತೆಯ ಭಾವ ಮೂಡಿಸಿದೆ ಎಂದು ಹೇಳಿದ್ದಾರೆ.