600 ಬಾರಿ ಕದನ ವಿರಾಮ ಉಲ್ಲಂಘಿಸಿದೆ ಭಾರತ: ಪಾಕಿಸ್ತಾನ ಆರೋಪ

ಭಾರತದ ಗಡಿಯೊಳಗೆ ನುಸುಳಲು ಉಗ್ರರಿಗೆ ಸಹಾಯ ಮಾಡುತ್ತಿರುವುದು ಹಾಗಾ ಗಡಿಯಲ್ಲಿ ಪದೇ ಪದೇ ಉದ್ಧಟತನವನ್ನು ಪ್ರದರ್ಶಿಸುತ್ತಿದ್ದರೂ ಭಾರತದ ವಿರುದ್ಧವೇ ಪಾಕಿಸ್ತಾನ ಆರೋಪ ಮಾಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಇಸ್ಲಾಮಾಬಾದ್: ಭಾರತದ ಗಡಿಯೊಳಗೆ ನುಸುಳಲು ಉಗ್ರರಿಗೆ ಸಹಾಯ ಮಾಡುತ್ತಿರುವುದು ಹಾಗಾ ಗಡಿಯಲ್ಲಿ ಪದೇ ಪದೇ ಉದ್ಧಟತನವನ್ನು ಪ್ರದರ್ಶಿಸುತ್ತಿದ್ದರೂ ಭಾರತದ ವಿರುದ್ಧವೇ ಪಾಕಿಸ್ತಾನ ಆರೋಪ ಮಾಡಿದೆ. 
ಭಾರತ ಈ ವರೆಗೂ 600 ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ಪರಿಣಾಮ 34 ಮಂದಿ ನಾಗರೀಕರು ಸಾವನ್ನಪ್ಪಿದ್ದಾರೆಂದು ಪಾಕಿಸ್ತಾನ ಆರೋಪ ಮಾಡಿದೆ. 
ಈ ಕುರಿತಂತೆ ಮಾತನಾಡಿರುವ ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ನಫೀಜ್ ಝಕಾರಿಯಾ ಅವರು, ಕಾಶ್ಮೀರಿಗಳಲ್ಲದವರನ್ನು ಕಾಶ್ಮೀರದಲ್ಲಿ ನೆಲೆಯೂರುವಂತೆ ಮಾಡುತ್ತಿರುವ ಭಾರತ, ಕಾಶ್ಮೀರವನ್ನು ತನ್ನ ಹಿಡಿತಕ್ಕೆ ಪಡೆದುಕೊಳ್ಳಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ. 
ಈ ಬಗ್ಗೆ ಈಗಾಗಲೇ ಪಾಕಿಸ್ದಾನದ ವಿದೇಶಾಂಗ ವ್ಯವಹಾರಗಳ ಮಾಜಿ ಸಲಹೆಗಾರ ಸರ್ತಾಜ್ ಅಜೀಜ್ ಅವರು ವಿಶ್ವಸಂಸ್ಥೆಗೂ ಪತ್ರವನ್ನು ಪಡೆದಿದ್ದಾರೆ. 
ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಭಾರತ, ಈ ವರೆಗೂ 600 ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ. ಪರಿಣಾಮ 34 ನಾಗರೀಕರು ಸಾವನ್ನಪ್ಪಿದ್ದಾರೆಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com