ಧ್ವಜಾರೋಹಣ ಮಾಡದವರು, ರಾಷ್ಟ್ರಗೀತೆ ಹಾಡದವರು ದೇಶದ್ರೋಹಿಗಳು: ಕಟಿಯಾರ್

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದಲ್ಲಿರುವ ಎಲ್ಲಾ ಮದರಸಾಗಳಲ್ಲೂ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆಯನ್ನು ಹಾಡಬೇಕೆಂದು...
ವಿನಯ್ ಕಟಿಯಾರ್
ವಿನಯ್ ಕಟಿಯಾರ್
ನವದೆಹಲಿ: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದಲ್ಲಿರುವ ಎಲ್ಲಾ ಮದರಸಾಗಳಲ್ಲೂ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆಯನ್ನು ಹಾಡಬೇಕೆಂದು ಉತ್ತರಪ್ರದೇಶ ಸರ್ಕಾರ ಆದೇಶ ನೀಡಿದ್ದ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕ ವಿನಯ್ ಕಟಿಯಾರ್ ಅವರು ಇದನ್ನು ಪಾಲಿಸದ ಜನರನ್ನು ದೇಶದ್ರೋಹಿಗಳು ಎಂದು ಪರಿಗಣಿಸಬೇಕು ಎಂದು ಹೇಳಿದ್ದಾರೆ. 
ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಕಟಿಯಾರ್, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶದ ನಡೆ ನಿಜಕ್ಕೂ ಸ್ವಾಗತಾರ್ಹ. ಯೋಗಿ ಅವರು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ. ಇದು ನಮ್ಮ ಹೆಮ್ಮೆ ಇದನ್ನು ನಾವು ಹಾರಿಸಬೇಕು. ಯಾವುದೇ ಶಾಲೆ ಇರಲಿ ಮದರಾಸ ಇರಲಿ ಅಥವಾ ಯಾವುದೇ ಇತರ ಸಂಘಟನೆಗಳೆ ಆಗಲಿ ನಾವು ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜವನ್ನು ಹಾರಿಸಬೇಕು. ಇದನ್ನು ಒಪ್ಪದವರನ್ನು ದೇಶದ್ರೋಹಿಗಳೆಂದು ಪರಿಗಣಿಸಬೇಕಿದೆ ಎಂದರು. 
ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ, ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಎಲ್ಲಾ ಮದರಾಸಗಳಲ್ಲಿ ಧ್ವಜಾರೋಹಣ, ರಾಷ್ಟ್ರಗೀತೆ ಹಾಡುವಂತೆ ಹಾಗೂ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವಂತೆ ಸೂಚಿಸಿದೆ. ಅಲ್ಲದೆ ಬೆಳಗ್ಗೆ 8 ಗಂಟೆಯೊಳಗೆ ಧ್ವಜಾರೋಹಣ ಮಾಡಬೇಕು. ಜತೆಗೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳ ಫೋಟೋ ಹಾಗೂ ವಿಡಿಯೋಗಳನ್ನು ಮಾಡುವಂತೆ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com