ಡೋಕ್ಲಾಮ್ ಬಿಕ್ಕಟ್ಟು ಆರಂಭವಾದಾಗಿನಿಂದಲೂ ಪದೇ ಪದೇ ಚೀನಾ ಯುದ್ಧದ ಮಾತುಗಳನ್ನು ಆಡಿದ್ದರೂ, ಭಾರತ ಮಾತ್ರ ಅತ್ಯಂತ ಸಂಯವನ್ನು ಕಾಯ್ದುಕೊಂಡೇ ಬರುತ್ತಿದೆ. ಆದರೆ, ಇದೀಗ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ, ಯಾವುದೇ ಪರಿಸ್ಥಿತಿ ಎದುರಿಸಲು ಗಡಿಯಲ್ಲಿ ಸೇನೆಯ ಜಮಾವಣೆಯನ್ನು ಹೆಚ್ಚಿಸಿದೆ ಎಂದು ವಿಶ್ಲೇಷಿಸಲಾಗಿದೆ.