ನೀಟ್ ನಿಂದ ತಮಿಳುನಾಡಿಗೆ ಒಂದು ವರ್ಷ ವಿನಾಯ್ತಿ

ಈ ವರ್ಷ ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌)ಯಿಂದ ತಮಿಳುನಾಡಿಗೆ ವಿನಾಯ್ತಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚೆನ್ನೈ: ಈ ವರ್ಷ ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್‌)ಯಿಂದ ತಮಿಳುನಾಡಿಗೆ ವಿನಾಯ್ತಿ ನೀಡಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಚೆನ್ನೈನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವೆ ಈ ಘೋಷಣೆ ಮಾಡಿದ್ದು, ಈ ಸಂಬಂಧ ತಮಿಳುನಾಡು ಸರ್ಕಾರ ನಾಳೆ ಕೇಂದ್ರ ಸರ್ಕಾರಕ್ಕೆ ಸುಗ್ರೀವಾಜ್ಞೆಯ ಕರಡು ಪ್ರತಿ ಸಲ್ಲಿಸುವುದಾಗಿ ತಮಿಳುನಾಡು ಆರೋಗ್ಯ ಸಚಿವ ವಿಜಯ್ ಬಾಸ್ಕರ್ ಅವರು ಖಚಿತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಈ ತೀರ್ಮಾನದಿಂದಾಗಿ ತಮಿಳುನಾಡಿನ ಲಕ್ಷಾಂತರ ವಿದ್ಯಾರ್ಥಿಗಳಿಗೆ ರಿಲೀಫ್ ಸಿಕ್ಕಿದೆ. ಆದರೆ ಮುಂದಿನ ವರ್ಷದಿಂದ ದೇಶದಾದ್ಯಂತ ಏಕರೂಪದ ಪರೀಕ್ಷಾ ಪದ್ಧತಿ ಜಾರಿಯಾಗುವುದು ಪಕ್ಕಾ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com