ಪ್ರತ್ಯೇಕ ಗೋರ್ಖಾಲ್ಯಾಂಡ್ ಚಳುವಳಿ: 25 ದಿನಗಳ ಜಿಜೆಎಂ ಉಪವಾಸ ಇಂದು ಅಂತ್ಯ

ಪ್ರತ್ಯೇಕ ಗೋರ್ಖಾಲ್ಯಾಂಡ್ ಗಾಗಿ ಒತ್ತಾಯಿಸಿ ಕಳೆದ 25 ದಿನಗಳಿಂದ ಗೋರ್ಖಾ ಜನಮುಕ್ತಿ ಮೋರ್ಚಾ(ಜಿಜೆಎಂ) ನಡೆಸುತ್ತಿದ್ದ...
ಜಿಜೆಎಂ ಬೆಂಬಲಿಗರು
ಜಿಜೆಎಂ ಬೆಂಬಲಿಗರು
Updated on
ಡಾರ್ಜೀಲಿಂಗ್: ಪ್ರತ್ಯೇಕ ಗೋರ್ಖಾಲ್ಯಾಂಡ್ ಗಾಗಿ ಒತ್ತಾಯಿಸಿ ಕಳೆದ 25 ದಿನಗಳಿಂದ ಗೋರ್ಖಾ ಜನಮುಕ್ತಿ ಮೋರ್ಚಾ(ಜಿಜೆಎಂ) ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಸೋಮವಾರ ಅಂತ್ಯಗೊಳ್ಳಲಿದೆ.
ಗೋರ್ಖಾಲ್ಯಾಂಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗೋರ್ಖಾ ಜನಮುಕ್ತಿ ಮೋರ್ಚಾದ ಮುಖ್ಯಸ್ಥ ಬಿಮಲ್ ಗುರುಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅಲ್ಲದೆ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಇಂದು ಉಪವಾಸ ಸತ್ಯಾಗ್ರಹ ಹಿಂಪಡೆಯಲು ಜಿಜೆಎಂ ನಿರ್ಧರಿಸಿದೆ.
ಗೋರ್ಖಾಲ್ಯಾಂಡ್ ವಿವಾದ ಪರಿಹಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರಾಜನಾಥ್ ಸಿಂಗ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com