ಮಹಾರಾಷ್ಟ್ರದ ಪ್ರಮುಖ ಉತ್ಸವಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮರುದಿನ ಆಚರಿಸುವ ‘ದಹಿ ಹಂಡಿ’ಯೂ ಒಂದು. ಮಾನವ ಪಿರಮಿಡ್ಗಳ ಮೂಲಕ ಎತ್ತರದಲ್ಲಿರುವ ಮೊಸರಿನ ಮಡಕೆಯನ್ನು ತಲುಪಿ, ಅದನ್ನು ಒಡೆಯುವ ಆಟದ ಉತ್ಸವವಿದು. ಈ ಅಪೂರ್ವವಾದ ದೃಶ್ಯವನ್ನು ವೀಕ್ಷಿಸಲು ದೇಶ ವಿದೇಶಗಳಿಂದ ಪ್ರವಾಸಿಗರು ಬರುವುದಿದೆ. ಪಿರಮಿಡ್ ರಚಿಸುವವರನ್ನು ‘ಗೋವಿಂದಾ ತಂಡ’ವೆಂದು ಕರೆಯಲಾಗುತ್ತದೆ.