ಇನ್ನು ಪ್ರಧಾನಿ ಮೋದಿ ಹೇಳಿಕೆ ಕುರಿತಂತೆ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಕಿಡಿಕಾರಿದ್ದಾರೆ. ಕಾಶ್ಮೀರ ಬಿಕ್ಕಟ್ಟು ಗುಂಡುಗಳಿಂದಾಗಲೂ ಅಥವಾ ಬೈಗುಳಗಳಿಂದಾಗಲೀ ಬಗೆಹರಿಯುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳುತ್ತಿದ್ದಾರೆ. ಕಾಶ್ಮೀರದಲ್ಲಿ ಒಂದೆಡೆ ಉಗ್ರರು ಗುಂಡು ಹಾರಿಸುತ್ತಿದ್ದಾರೆ, ಮತ್ತೊಂದೆಡೆ ಭದ್ರತಾ ಸಿಬ್ಬಂದಿಗಳು ಗುಂಡು ಹಾರಿಸುತ್ತಿದ್ದಾರೆ, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವಿನ ಘರ್ಷಣೆಗಳಿಂದಾಗಿ ಕಾಶ್ಮೀರ ಸಮಸ್ಯೆ ಬಗೆಹರಿಯುತ್ತಿಲ್ಲ ಎಂದು ಹೇಳಿದ್ದಾರೆ.