ಈ ಮಧ್ಯೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಮ್ಮ ಕರ್ತವ್ಯ ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ರಾಜೀವ್ ಮಿಶ್ರಾ ಅವರನ್ನು ಆರೋಪಿಸಿದ್ದಾರೆ. ಮಕ್ಕಳು ಆಮ್ಲಜನಕ ಪೂರೈಕೆ ಕೊರತೆಯಿಂದ ಮೃತಪಟ್ಟರೇ ಎಂದು ನಿಖರವಾಗಿ ತನಿಖೆ ನಡೆಸಲು ಸಚಿವರನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು, ಪ್ರಕರಣ ಸಂಬಂಧ ಯಾರೋ ತಪ್ಪಿತಸ್ಥರಾದರೂ ಕೂಡ ಶಿಕ್ಷಿಸದೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.