ವಿವಾದ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿಯವರು, ದೂರದರ್ಶನ ಹಾಗೂ ಎಐಆರ್ ಏನು ಬಿಜೆಪಿ-ಆರ್'ಎಸ್ಎಸ್'ನವರ ಖಾಸಗಿ ಆಸ್ತಿಯಲ್ಲ. ವಿರೋಧಪಕ್ಷಗಳು ಹಾಗೂ ಆಯ್ಕೆಗೊಂಡ ಮುಖ್ಯಮಂತ್ರಿಗಳೂ ಸೇರಿದಂತೆ ಎಲ್ಲರ ದನಿ ಹತ್ತಿಕ್ಕಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಆಪ್ತರಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಭಾಷಣ ಪ್ರಸಾರ ಮಾಡಲು ದೂರದರ್ಶನ ಹಾಗೂ ಎಐಆರ್ ನಿರಾಕರಿಸುವುದನ್ನು ಸಿಪಿಐ(ಎಂ) ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ. ವಿವಾದ ಸಂಬಂಧ ದೂರದರ್ಶನವಾಗಲೀ ಅಥವಾ ಎಐಆರ್ ಆಗಲೀ ಈ ವರೆಗೂ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಿಲ್ಲ.