ಇದೇ ವೇಳೆ 1947ರ ಪರಿಸ್ಥಿತಿ ಕುರಿತಂತೆ ಮಾತನಾಡಿರುವ ಅವರು, ಅಂದು ಕಾಶ್ಮೀರ ಸುಲಭವಾಗಿ ಪಾಕಿಸ್ತಾನದೊಂದಿಗೆ ಕೈಜೋಡಿಸಬಹುದಿತ್ತು. ಆದರೆ, ಕಾಶ್ಮೀರಿಗರು ಭಾರತವನ್ನು ಆಯ್ಕೆ ಮಾಡಿಕೊಂಡಿದ್ದರು. ನಮ್ಮ ತಂದೆ ಗಾಂಧೀಜಿಯವರೊಂದಿಗೆ ಕೈಜೋಡಿಸುವ ನಿರ್ಧಾರ ಕೈಗೊಂಡಿದ್ದರು. ತಂದೆಯವರ ನಿಯಮ ಹಾಗೂ ತತ್ತ್ವಗಳನ್ನೇ ನಾನು ಪಾಲನೆ ಮಾಡುತ್ತಿದ್ದೇನೆ. ಗಾಂಧೀಜಿಯವರ ದೇಶದೊಂದಿಗೆ ನಾನು ಕೈಜೋಡಿಸಿದ್ದೇನೆ. ನಾವು ಪಾಕಿಸ್ತಾನದ ಅಥವಾ ವಿದೇಶಿ ಮುಸ್ಲಿಮರಲ್ಲ. ನಾವು ಭಾರತೀಯ ಮುಸ್ಲಿಮರು. ನಮ್ಮ ನೋವನ್ನು ಅರ್ಥ ಮಾಡಿಕೊಳ್ಳಿ. ಈಗಾಗಲೇ ಒಂದು ಪಾಕಿಸ್ತಾನ ಸ್ಥಾಪನೆಗೊಂಡಿದೆ. ಇನ್ನು ಎಷ್ಟು ಪಾಕಿಸ್ತಾನ ಸೃಷ್ಟಿಸಲು ಹೊರಟಿದ್ದೀರಿ?