ನಿನ್ನೆಯಷ್ಟೆ ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು, ಜಯಲಲಿತಾ ಸಾವಿನ ಕುರಿತು ತನಿಖೆಗೆ ಮದ್ರಾಸ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಆಯೋಗ ರಚಿಸುವುದಾಗಿ ಹಾಗೂ ಅವರ ಪೊಯೆಸ್ ಗಾರ್ಡನ್ ನಿವಾಸವನ್ನು ಸ್ಮಾರಕವಾಗಿ ಪರಿವರ್ತಿಸಲಾಗುವುದು ಮತ್ತು ಸರ್ಕಾರವೇ ಅದನ್ನು ನಿರ್ವಹಣೆ ಮಾಡಲಿದೆ ಎಂದು ಘೋಷಿಸಿದ್ದರು.