ಗೋರಕ್ ಪುರ ದುರಂತ ಪ್ರಕರಣವನ್ನು ಸಿಬಿಐಗೆ ವಹಿಸಿ: ಅಖಿಲೇಶ್ ಆಗ್ರಹ

ಗೋರಕ್ ಪುರ ದುರಂತ ಪ್ರಕರಣವನ್ನು ಉನ್ನತ ಮಟ್ಟದ ಸಿಬಿಐ ತನಿಖೆಗೆ ವಹಿಸಬೇಕೆಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ....
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Updated on
ಲಕ್ನೋ: ಗೋರಕ್ ಪುರ ದುರಂತ ಪ್ರಕರಣವನ್ನು ಉನ್ನತ ಮಟ್ಟದ ಸಿಬಿಐ ತನಿಖೆಗೆ ವಹಿಸಬೇಕೆಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಗಿ ಆದಿತ್ಯನಾಥ್ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐ ಗೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.
ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಸಿಬಿಐ ಜೊತೆ ಹೆಚ್ಚಿನ ನಂಟಿದೆ, ಸಿಬಿಐ ಸರ್ಕಾರದ ಉತ್ತರ ಪ್ರದೇಶದಲ್ಲಿ ಹಲವು ತನಿಖೆಗಳನ್ನು ಕೈಗೊಂಡಿದೆ, ಹೀಗಾಗಿ ಈ ಪ್ರಕರಣವನ್ನು ಸಹ ಸಿಬಿಐ ತನಿಖೆಗೆ ವಹಿಸಬೇಕೆಂದು ಹೇಳಿದ್ದಾರೆ.
ಉತ್ತರ ಪ್ರದೇಶ ಜನತೆ ಬಿಜೆಪಿ ಸುಳ್ಳು ಭರವಸೆಗಳನ್ನು ಅರ್ಥಮಾಡಿಕೊಳ್ಳದಂತೆ ಮೂರ್ಖರಲ್ಲ ಎಂದು ಹೇಳಿದ್ದಾರೆ.
ಕಳೆದ ಶುಕ್ರವಾರ ಮತ್ತು ಶನಿವಾರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಕೇವಲ ಎರಡು ದಿನಗಳ ಅಂತರದಲ್ಲಿ 63 ಮಂದಿ ಸಾವನ್ನಪ್ಪಿದ್ದರು. ಈ ವಿಚಾರ ಇಂದಿಗೂ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಸಿಎಂ  ಯೋಗಿ ಆದಿತ್ಯಾನಾಥ್ ಸರ್ಕಾರಕ್ಕೆ ತೀವ್ರ ಮುಖಭಂಗವನ್ನುಂಟು ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com