ಒಡಿಶಾದ ಪುರಿಯಿಂದ ಉತ್ತರಖಂಡ್ ನ ಹರಿದ್ವಾರಕ್ಕೆ ತೆರಳುತ್ತಿದ್ದ ರೈಲು ಇಂದು ಸಂಜೆ 5.45ರ ಸುಮಾರಿಗೆ ಮುಜಾಫರ್ ನಗರ ಜಿಲ್ಲೆಯ ಖತೌಲಿ ರೈಲ್ವೆ ನಿಲ್ದಾಣದ ಸಮೀಪ ಹಳಿ ತಪ್ಪಿದ್ದು, ಘಟನೆಯಲ್ಲಿ ಕೆಲವು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ. ಆದರೆ ಪೊಲೀಸ್ ಅಧಿಕಾರಿಗಳು ಇದನ್ನು ಖಚಿತಪಡಿಸಿಲ್ಲ.