ಭಾನುವಾರ ಮುಂಬೈನಲ್ಲಿ ಬಿಜೆಪಿ ಅಧ್ಯಕ್ಷ ಆಶಿಶ್ ಶೆಲರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅರುಣ್ ಜೇಟ್ಲಿ, ನೋಟು ನಿಷೇಧ ಬಳಿಕ ಜಮ್ಮು-ಕಾಶ್ಮೀರದ ಪ್ರತ್ಯೇಕವಾದಿಗಳು ಹಾಗೂ ನಕ್ಸಲ್ ಪೀಡಿತ ರಾಜ್ಯಗಳಲ್ಲಿ ನಡೆಯುತ್ತಿದ್ದ ವಿದ್ವಂಸಕ ಕೃತ್ಯಗಳು ಕಡಿಮೆಯಾಗಿದೆ. ಪ್ರತ್ಯೇಕವಾದಿಗಳು ಹಾಗೂ ಮಾವೋವಾದಿಗಳಿಗೆ ಸರಬರಾಜಾಗುತ್ತಿದ್ದ ಹಣಕ್ಕೆ ಬ್ರೇಕ್ ಬಿದ್ದಿದ್ದು, ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪ್ರತಿನಿತ್ಯ ಕಾಣುತ್ತಿದ್ದ ಪ್ರತಿಭಟನೆ, ಕಲ್ಲು ತೂರಾಟ ಗಣನೀಯವಾಗಿ ಕಡಿಮೆಯಾಗಿದೆ, ನೋಟು ನಿಷೇಧಕ್ಕೂ ಮೊದಲು ಬೃಹತ್ ಸಂಖ್ಯೆಯಲ್ಲಿ ಕಲ್ಲು ತೂರಾಟಗಾರರ ಗುಂಪು ಕಾಣಿಸಿಕೊಳ್ಳುತ್ತಿತ್ತು. ಆದರೆ ಇದೀಗ ಆ ಸಂಖ್ಯೆಯಲ್ಲಿ ಗಣನೀಯ ಕಡಿಮೆಯಾಗಿದೆ. ಹೆಚ್ಚೆಂದರೆ 25 ಮಂದಿ ಸೇರಿಕೊಂಡು ಕಲ್ಲುತೂರಾಟ ನಡೆಸುತ್ತಿದ್ದಾರೆ ಎಂದು ಹೇಳಿದ್ದರು.