ತ್ರಿವಳಿ ತಲಾಖ್ ಪ್ರಶ್ನಿಸಿ ಕೆಲ ಮಹಿಳೆಯರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಕೇಂದ್ರ ಸರ್ಕಾರವು ಸಹ ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು. ತ್ರಿವಳಿ ತಲಾಖ್ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು. ತ್ರಿವಳಿ ತಲಾಖ್ ಪದ್ಧತಿಯು ಇಸ್ಲಾಂ ಧರ್ಮದ ಮೂಲಭೂತ ಅಂಶ ಅಲ್ಲ ಎಂದೂ ಸರ್ಕಾರ ಪ್ರತಿಪಾದಿಸಿತ್ತು.