ಸತ್ನ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ನೀರಿನ ಬಾಟಲಿಗೆ ಸೊಳ್ಳೆ ನಿವಾರಕ ದ್ರವವನ್ನು ಹಾಕಿ ಆರೋಪಿ ವಿದ್ಯಾರ್ಥಿನಿ ಸಂತ್ರಸ್ತ ವಿದ್ಯಾರ್ಥಿನಿಗೆ ಕೊಟ್ಟಿದ್ದಾಳೆ. ಈ ನೀರನ್ನು ಕುಡಿದ ವಿದ್ಯಾರ್ಥಿನಿ ನಂತರ ವಾಂತಿ ಮಾಡಿಕೊಂಡಿದ್ದು ಅಸ್ವಸ್ಥಳಾಗಿದ್ದಾಳೆ. ಇದನ್ನು ಅರಿತ ಆಡಳಿತ ಮಂಡಳಿ ಕೂಡಲೇ ಪೋಷಕರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.