ಹರಿಯಾಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಿಎಸ್ ದೇಶಿ ಅವರೊಂದಿಗೆ ಇಂದು ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಧು, ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ರಾಮ್ ರಹೀಮ್ ಸಿಂಗ್ ಅವರಿಗೆ ಸೋಮವಾರ ಪಂಚಕುಲ ಸಿಬಿಐ ವಿಶೇಷ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸುತ್ತಿದ್ದು, ಅಂದು ಅಪರಾಧಿ ಬಾಬಾನನ್ನು ಕೋರ್ಟ್ ಗೆ ಹಾಜರುಪಡಿಸುವುದಿಲ್ಲ. ಬದಲಾಗಿ ಜೈಲಿನಲ್ಲಿಯೇ ಕೋರ್ಟ್ ಕಲಾಪಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ಅಲ್ಲಿಯೇ ನ್ಯಾಯಾಧೀಶರು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದ್ದಾರೆ ಎಂದು ಹೇಳಿದ್ದಾರೆ.