ಬ್ಲೂವೇಲ್ ಗೇಮ್ ಭೂತ: ಆತ್ಮಹತ್ಯೆಗೆಂದು ಜೈಪುರದಿಂದ ಮುಂಬೈಗೆ ಬಂದಿದ್ದ ಬಾಲಕನ ರಕ್ಷಣೆ

ಬ್ಲೂವೇಲ್ ಆನ್'ಲೈನ್ ಗೇಮ್ ಹುಚ್ಚಿನಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ಜೈಪುರದಿಂದ ಮನೆ ಬಿಟ್ಟು ಮುಂಬೈಗೆ ಬಂದಿದ್ದ 16 ವರ್ಷದ ಬಾಲಕನೊಬ್ಬನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಜೈಪುರ: ಬ್ಲೂವೇಲ್ ಆನ್'ಲೈನ್ ಗೇಮ್ ಹುಚ್ಚಿನಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ಜೈಪುರದಿಂದ ಮನೆ ಬಿಟ್ಟು ಮುಂಬೈಗೆ ಬಂದಿದ್ದ 16 ವರ್ಷದ ಬಾಲಕನೊಬ್ಬನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. 
10 ತರಗತಿ ಓದುತ್ತಿರುವ ಬಾಲಕನೊಬ್ಬ ಬ್ಲೂವೇಲ್ ಗೇಮ್ ಆಡುತ್ತಿದ್ದು, ಆಟದ ಕೊನೆಯ ಹಂತದಲ್ಲಿ ನೀಡಲಾಗಿದ್ದ ಟಾಸ್ಕ್ ನ್ನು ಪೂರ್ಣಗೊಳಿಸಲು ಆತ್ಮಹತ್ಯೆ ಮಾಡಿಕೊಳ್ಳಲು ರೈಲು ಹತ್ತಿ ಜೈಪುರದಿಂದ ಮುಂಬೈಗೆ ಬಂದಿದ್ದಾನೆ. 
ಬಾಲಕ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆಂಬ ಮಾಹಿತಿ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು ಆತನ ಬಳಿಯಿದ್ದ ಫೋನನ್ನು ಟ್ರ್ಯಾಕ್ ಮಾಡಿದ್ದಾರೆ. ಈ ವೇಳೆ ಬಾಲಕ ಮುಂಬೈನ ಚರ್ಚ್ ಗೇಟ್ ಬಳಿ ಇರುವುದು ಕಂಡು ಬಂದಿದೆ. ಕೂಜಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಶುಕ್ರವಾರ ರಾತ್ರಿ ಬಾಲಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 
ಬಾಲಕನನ್ನು ರಕ್ಷಣೆ ಮಾಡಿದ ಪೊಲೀಸರು ತಪಾಸಣೆ ನಡೆಸಿದಾಗ ಆತನ ಬಳಿ ಚಾಕು ಇರುವುದು ಪತ್ತೆಯಾಗಿದೆ. ಬಾಲಕ ಆತ್ಮಹತ್ಯೆ ಮಾಡಿಕೊಳ್ಳುವ ಹಂತದಲ್ಲಿದ್ದ ಎಂದು ಕರ್ನಿ ವಿಹಾರ್ ಪೊಲೀಸ್ ಠಾಣೆಯ ಮಹಾವೀರ್ ಸಿಂಗ್ ಅವರು ತಿಳಿಸಿದ್ದಾರೆ. ಪ್ರಸ್ತುತ ಬಾಲಕನನ್ನು ಪೊಲೀಸರು ಪೋಷಕರ ವಶಕ್ಕೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com