ಹರಿಯಾಣದಲ್ಲಿ ನಿನ್ನೆಯಿಂದ ಈ ವರೆಗೂ ಯಾವುದೇ ರೀತಿಯ ಹಿಂಸಾಚಾರ ನಡೆದಿರುವ ಕುರಿತು ವರದಿಗಳಾಗಿಲ್ಲ. ಹೀಗಾಗಿ ಹಲವೆಡೆ ಕರ್ಫ್ಯೂವನ್ನು ಅಧಿಕಾರಿಗಳು ಸಡಿಲಗೊಳಿಸಿದ್ದಾರೆ. ಪ್ರಸ್ತುತ ಹಲವೆಡೆ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ನಾಳೆ ನ್ಯಾಯಾಲಯ ರಾಮ್ ರಹೀಮ್ ಅವರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುತ್ತಿರುವ ಹಿನ್ನಲೆಯಲ್ಲಿ ಹೈಅಲರ್ಟ್ ನ್ನು ಮುಂದುವರೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.