ಬಾಬಾ ರಾಮ್ ದೇವ್
ಬಾಬಾ ರಾಮ್ ದೇವ್

ಪತಂಜಲಿ ಸಂಸ್ಥೆಗೆ ಭೂಮಿ ಮಂಜೂರನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ

ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆಗೆ ಉತ್ತರ ಪ್ರದೇಶದ ನೋಯ್ಡಾದಲ್ಲಿ 4,000 ಎಕರೆ ಭೂಮಿ ನೀಡಿರುವುದನ್ನು ಪ್ರಶ್ನಿಸಿ ಅಲ್ಲಹಾಬದ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
Published on
ಅಲಹಾಬಾದ್: ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆಗೆ ಉತ್ತರ ಪ್ರದೇಶದ ನೋಯ್ಡಾದಲ್ಲಿ 4,000 ಎಕರೆ ಭೂಮಿ ನೀಡಿರುವುದನ್ನು ಪ್ರಶ್ನಿಸಿ ಅಲ್ಲಹಾಬದ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. 
ಆ.29 ರಂದು ಅರ್ಜಿ ವಿಚಾರಣೆಗೆ ಬರಲಿದ್ದು, ನ್ಯಾ.ತರುಣ್ ಅಗರ್ವಾಲ್, ನ್ಯಾ. ಅಶೋಕ್ ಅಗರ್ವಾಲ್ ವಿಚಾರಣೆ ನಡೆಸಲಿದ್ದಾರೆ. ಪತಂಜಲಿ ಯೋಗ ಸಂಸ್ಥಾನಕ್ಕೆ ಭೂಮಿ ಮಂಜೂರು ಮಾಡಿರುವುದರ ಬಗ್ಗೆ ಯಮುನಾ ಎಕ್ಸ್ ಪ್ರೆಸ್ ಪ್ರಾಧಿಕಾರ, ಉತ್ತರ ಪ್ರದೇಶ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಕೋರಿದೆ. 
ಗೌತಮ್ ಬುದ್ಧ ನಗರದ ಅಸಾಫ್ ಎಂಬುವವರು ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆಗೆ ಉತ್ತರ ಪ್ರದೇಶದ ನೋಯ್ಡಾದಲ್ಲಿ 4,000 ಎಕರೆ ಭೂಮಿ ನೀಡಿರುವುದನ್ನು ಪ್ರಶ್ನಿಸಿ ಅಲ್ಲಹಾಬದ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com