ರಾಜಕೀಯದಾಟದಲ್ಲಿ ಅಹ್ಮದ್ ಪಟೇಲ್ ಅವರನ್ನು ಸೋಲಿಸಲು ಇನ್ನಿಲ್ಲದ ಕಸರತ್ತು ಮಾಡಿದ್ದ ಆಡಳಿತಾರೂಢ ಬಿಜೆಪಿ ಪಕ್ಷವು, ರಾಜ್ಯಸಭಾ ಚುನಾವಣೆಯಲ್ಲಿ ಪಟೇಲ್ ವಿರುದ್ಧ ಇತ್ತಿಚೆಗಷ್ಟೇ ಕಾಂಗ್ರೆಸ್ ತೊರೆದಿದ್ದ ಬಲವಂತಸಿನ್ಹ ರಜಪೂತ್ ಅವರನ್ನು ಕಣಕ್ಕಿಳಿಸಿತ್ತು. ಅಹ್ಮದ್ ಪಟೇಲ್ ಅವರನ್ನು ಹೇಗಾದಲೂ ಮಾಡಿ ಸೋಲಿಸಬೇಕೆಂದು ನಿರ್ಧರಿಸಿದ್ದ ಬಿಜೆಪಿ, ಕಾಂಗ್ರೆಸ್ ಶಾಸಕರನ್ನು ಖರೀದಿಸುವ ತಂತ್ರಗಾರಿಕೆಗೆ ಕೈಹಾಕಿತ್ತೆಂಬ ವದಂತಿಗಳೂ ಹರಡಿದ್ದವು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನ ಎಲ್ಲಾ 44 ಶಾಸಕರನ್ನು ಬೆಂಗಳೂರಿಗೆ ಹೈಜಾಕ್ ಮಾಡಿ ಕರೆತರಲಾಗಿತ್ತು. ರಾಜ್ಯಸಭೆ ಚುನಾವಣೆಯ ಮುನ್ನಾದಿನ ಎಲ್ಲಾ ಶಾಸಕರು ಗುಜರಾತ್ ರಾಜ್ಯಕ್ಕೆ ವಾಪಸ್ಸಾಗಿದ್ದರು.