ನಂಬಿಕೆಯ ಹೆಸರಿನಲ್ಲಿ ನಡೆಸಲಾಗುತ್ತಿರುವ ಹಿಂಸಾಚಾರ ಖಂಡನೀಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹೇಳಿದ್ದರು. ಆದರೆ, ಮತ್ತೊಂದೆಡೆ ಹೈಕೋರ್ಟ್ ಸರ್ಕಾರದ ವಿರುದ್ಧವೇ ತೀವ್ರವಾಗಿ ಕಿಡಿಕಾರಿತ್ತು. ರಾಜಕೀಯ ಅಜೆಂಡಾಗಳಿಂದಾಗಿ ಹರಿಯಾಣ ಸರ್ಕಾರ ಪಂಚಕುಲ ಹೊತ್ತಿಯುವಂತೆ ಮಾಡಿದೆ. ಇದು ನಿಜಕ್ಕೂ ಆಘಾತಕಾರಿ ವಿಚಾರ ಎಂದು ಹೇಳಿತ್ತು. ಈ ರೀತಿಯ ಘಟನೆಗಳು ದೇಶದಾದ್ಯಂತ ನಡೆಯುತ್ತಿದೆ ಎಂದು ತಿಳಿಸಿದೆ.