'ಆ ಪತ್ರ ಪ್ರಕಟಿಸಿದ ನಂತರ ನನ್ನ ತಂದೆಗೆ ಹಲವು ಬಾರಿ ಬೆದರಿಕೆಗಳು ಬಂದಿವೆ. ಆ ಪತ್ರದ ಆಧಾರದ ಮೇಲೆಯೇ ಹೈಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಇದಾದ ಬಳಿಕ ಅಕ್ಬೋಬರ್ 24, 2002ರಲ್ಲಿ ನನ್ನ ತಂದೆ ಮೇಲೆ ದಾಳಿ ನಡೆದಿತ್ತು. ಅಂದು ಇಬ್ಬರು ದುಷ್ಕರ್ಮಿಗಳು ನನ್ನ ತಂದೆ ಮೇಲೆ ಐದು ಸುತ್ತು ಗುಂಡು ಹಾರಿಸಿದ್ದರು. ಹಾಗ ನನಗೆ ಕೇವಲ 21 ವರ್ಷ. ಘಟನೆಯ ನಂತರ ಪೊಲೀಸರು ಎಫ್ಐಆರ್ ನಲ್ಲಿ ಡೇರಾ ಮುಖ್ಯಸ್ಥನ ಹೆಸರು ಉಲ್ಲೇಖಿಸದಿರುವುದರಿಂದ ನ್ಯಾಯಕ್ಕಾಗಿ ಎಲ್ಲಿಗೆ ಹೋಗಬೇಕು ಎಂಬುದು ನನಗೆ ತಿಳಿಯಲಿಲ್ಲ' ಎಂದಿದ್ದಾರೆ. ಅಲ್ಲದೆ ಅಂದಿನಿಂದಲೇ ನಾನು ಕಾನೂನು ಹೋರಾಟ ಆರಂಭಿಸಿದೆ ಎಂದು ಹೇಳಿದ್ದಾರೆ.