ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರಿಗೆ ಈಗ ಹೊಸ ಸಂಕಷ್ಟ ಎದುರಾಗಿದ್ದು, ತಮ್ಮ ನಾಯಕತ್ವದ ವಿರುದ್ಧವೇ ತಿರುಗಿಬಿದ್ದಿರುವ ಜೈಲು ಪಾಲಾಗಿರುವ ವಿ.ಕೆ.ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಅವರು, ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ, ಇಲ್ಲದಿದ್ದರೆ ಪಕ್ಷದಲ್ಲಿರುವ ತಮ್ಮ ರಹಸ್ಯ ಬೆಂಬಲಿಗರ(ಸ್ಲೀಪರ್ ಸೆಲ್)ನ್ನು ಸೆಳೆಯುವುದಾಗಿ ಬುಧವಾರ ಎಚ್ಚರಿಕೆ ನೀಡಿದ್ದಾರೆ.