ಕೆಲ ದಿನಗಳ ಹಿಂದಷ್ಟೇ ಉತ್ಕಲ್ ಎಕ್ಸ್ ಪ್ರೆಸ್ ನ 13 ಹೋಗಿಗಳು ಹಳಿ ತಪ್ಪಿ 22 ಪ್ರಯಾಣಿಕರು ಸಾವನ್ನಪ್ಪಿದ್ದರು. ಅಲ್ಲದೆ 156 ಮಂದಿ ಗಾಯಗೊಂಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಕೇಂದ್ರ ರೈಲ್ವೇ ಸಚಿವಾಲಯ, ದುರಂತಕ್ಕೆ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿ, ದುರಂತಕ್ಕೆ ಕಾರಣರಾದವರ ವಿರುದ್ಧದ ಅಭೂತಪೂರ್ವ ಶಿಸ್ತುಕ್ರಮದ ಭಾಗವಾಗಿ ರೈಲ್ವೇ ಇಲಾಖೆಯ ಮೂವರು ಉನ್ನತಾಧಿಕಾರಿಗಳನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿತ್ತು.