ಇದೇ ವೇಳೆ ಈ ಹಿಂದಿನ ಕಾಂಗ್ರೆಸ್ ಸರ್ಕಾರವನ್ನು ಕುಟುಕಿದ ಜೇಟ್ಲಿ, ಈ ಹಿಂದಿನ 10 ವರ್ಷಗಳ ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರವಾಗಿತ್ತು, ಪ್ರಮುಖ ನಾಯಕನಿಲ್ಲದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರಧಾನಿ ಕೇವಲ ಕಚೇರಿಗೆ ಮಾತ್ರ ಸೀಮಿತವಾಗಿದ್ದರು. ಅವರಿಗೆ ಯಾವುದೇ ರೀತಿಯ ಅಧಿಕಾರ ಇರಲ್ಲಿಲ್ಲ. ವಿದೇಶಿ ಬಂಡವಾಳ ಸಂಪೂರ್ಣ ಸ್ಥಗಿತವಾಗಿತ್ತು. ಅಭಿವೃದ್ಧಿ ಕಾರ್ಯ ಸ್ಥಗಿತವಾಗಿತ್ತು. ಆ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಹಗರಣಗಳು ನಡೆದಿವೆ. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರಂತರವಾಗಿ ಅಭಿವೃದ್ಧಿಯತ್ತ ಸಾಗಿದೆ. ಇಂದು ಉದ್ಯಮ ಸ್ನೇಹಿ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 42ನೇ ಸ್ಥಾನದಲ್ಲಿದೆ. ಇದಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಕಾರಣ, ಬಿಜೆಪಿ ದೇಶದ ಜನರ ವಿಶ್ವಾಸಾರ್ಹತೆ ಕಾಪಾಡಿಕೊಂಡಿದ್ದು, ಕಾಂಗ್ರೆಸ್ ಪಕ್ಷ ಜನಮಾನಸದಿಂದ ಅಳಿಸಿ ಹೋಗುತ್ತಿದೆ ಎಂದು ಹೇಳಿದರು.