ಗುಜರಾತ್ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ರೈತರ ಸಾಲ ಮನ್ನಾ, 16 ಗಂಟೆ ವಿದ್ಯುತ್ ಭರವಸೆ

ಗುಜರಾತ್ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಸೋಮವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು...
ಪ್ರಣಾಳಿಕೆ ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ನಾಯಕರು
ಪ್ರಣಾಳಿಕೆ ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ನಾಯಕರು
Updated on
ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಸೋಮವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ರೈತರ ಸಾಲ ಮನ್ನಾ ಹಾಗೂ ನೀರಾವರಿಗೆ 16 ಗಂಟೆ ವಿದ್ಯುತ್ ನೀಡುವುದು ಸೇರಿದಂತೆ ಹಲವು ಭರವಸೆಗಳನ್ನು ಗುಜರಾತ್ ಜನತೆಗೆ ನೀಡಿದೆ.
ಕೆಲ ಪ್ರಮುಖ ಭರವಸೆಗಳು
  • ರಾಜ್ಯದ 25 ಲಕ್ಷ ಯುವಕರಿಗೆ ಉದ್ಯೋಗ ಒದಗಿಸುವುದಕ್ಕಾಗಿ 32 ಸಾವಿರ ಕೋಟಿ ರುಪಾಯಿ ವಿಶೇಷ ಪ್ಯಾಕೇಜ್.
  • ನಿರುದ್ಯೋಗಿ ಯುವಕರಿಗೆ 4 ಸಾವಿರ ರುಪಾಯಿ ಭತ್ಯೆ.
  • ಗುತ್ತಿಗೆ ಆಧಾರಿತ ಸರ್ಕಾರಿ ನೌಕರಿ ರದ್ದು, ಈಗೀರುವ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದು.
  • ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ತ್ವರಿತ ವಿಚಾರಣೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್
  • ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಮತ್ತು ಸ್ಮಾರ್ಟ್ ಫೋನ್
  • ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 10 ರುಪಾಯಿ ಇಳಿಕೆ
  • ಶಿಕ್ಷಣ ಮತ್ತು ಉದ್ಯೋಗದಲ್ಲಿ ಪಟಿದಾರ್ ಸಮುದಾಯಕ್ಕೆ ಸಮಾನ ಹಕ್ಕು
  • ಎಸ್ಸಿ, ಎಸ್ಟಿ ಮತ್ತು ಒಬಿಸಿ ಈಗ ನೀಡಲಾಗಿರುವ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಇಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com