ಗುಜರಾತ್ ಚುನಾವಣೆ ಪ್ರಚಾರದಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದು, ಮಣಿ ಶಂಕರ್ ಅಯ್ಯರ್ ಒಂದು ಕುಟುಂಬಕ್ಕೆ ನಿಷ್ಠೆ ತೋರುವುದರಲ್ಲಿ ಹಿಂದೇಟು ಹಾಕುವುದಿಲ್ಲ, ಹಾಗಾಗಿಯೇ ಅವರು ರಾಹುಲ್ ಗಾಂಧಿ ಪದೋನ್ನತಿ ಬಗ್ಗೆ ಮಾತನಾಡುತ್ತಾ ಔರಂಗಜೇಬ್ ಷಾ ಜಹಾನ್ ಸ್ಥಾನಕ್ಕೆ ಬಂದಾಗ ಯಾವುದಾದರೂ ಚುನಾವಣೆ ನಡೆದಿತ್ತಾ? ಎಂದು ಪ್ರಶ್ನಿಸಿದ್ದಾರೆ, ಕಾಂಗ್ರೆಸ್ ಗೆ ಔರಂಗಜೇಬ್ ರಾಜ್ ಸಿಕ್ಕಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ನಮಗೆ 125 ಕೋಟಿ ಭಾರತೀಯರೇ ಹೈಕಮಾಂಡ್ ಎಂದು ಹೇಳಿದ್ದಾರೆ.