ನವದೆಹಲಿ: ದೆಹಲಿ ನಗರದಲ್ಲಿನ ತೀವ್ರ ವಾಯುಮಾಲಿನ್ಯವನ್ನು ನಿಯಂತ್ರಿಸಲು ಸಮಗ್ರ ಕ್ರಿಯಾ ಯೋಜನೆಯನ್ನು ಸಲ್ಲಿಸದಿರುವ ದೆಹಲಿ ಸರ್ಕಾರಕ್ಕೆ ತೀವ್ರ ಛೀಮಾರಿ ಹಾಕಿರುವ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ, ತೀವ್ರ ವಾಯುಮಾಲಿನ್ಯವಿದ್ದರೂ ಕೂಡ ಭಾರತ-ಶ್ರೀಲಂಕಾ ಕ್ರಿಕೆಟ್ ಪಂದ್ಯವನ್ನು ನಿಗದಿಪಡಿಸಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.