ಚೆನ್ನೈ ಆರ್ ಕೆ ನಗರ ಉಪ ಚುನಾವಣೆ: ನಟ ವಿಶಾಲ್, ದೀಪಾ ಜಯಕುಮಾರ್ ನಾಮಪತ್ರ ತಿರಸ್ಕೃತ

ಆರ್ ಕೆ ನಗರ ಉಪ ಚುನಾವಣೆಗೆ ಖ್ಯಾತ ತಮಿಳು ನಟ ವಿಶಾಲ್ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ....
ವಿಶಾಲ್, ದೀಪಾ ಜಯಕುಮಾರ್
ವಿಶಾಲ್, ದೀಪಾ ಜಯಕುಮಾರ್
Updated on
ಚೆನ್ನೈ: ಆರ್ ಕೆ ನಗರ ಉಪ ಚುನಾವಣೆಗೆ ಖ್ಯಾತ ತಮಿಳು ನಟ ವಿಶಾಲ್ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಸಂಬಂಧಿ ದೀಪಾ ಜಯಕುಮಾರ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾ ಆಯೋಗ ಮಂಗಳವಾರ ತಿರಸ್ಕರಿಸಿದೆ.
ನಟ ಹಾಗೂ ನಾಡಿಗರ್ ಸಂಗಮ್ ಪ್ರಧಾನ ಕಾರ್ಯದರ್ಶಿಯಾಗಿರುವ ವಿಶಾಲ್ ಅವರು ಕಳೆದ ಶನಿವಾರ ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿದ್ದರು. ಅಲ್ಲದೆ ಸೋಮವಾರ ಆರ್ ಕೆ ನಗರ ಉಪ ಚುನಾವಣೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು. 
ಇನ್ನು ದೀಪಾ ಜಯಕುಮಾರ್ ಸಹ ನಿನ್ನೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು. ಆದರೆ ನಾಮಪತ್ರ ಅರ್ಜಿಯಲ್ಲಿ ಕೆಲವು ಭಿನ್ನತೆಗಳಿವೆ ಎಂಬ ಕಾರಣಕ್ಕೆ ವಿಶಾಲ್ ಹಾಗೂ ದೀಪಾ ಅವರ ನಾಮಪಪತ್ರವನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದಾರೆ.
ಜಯಲಲಿತಾ ಅವರ ನಿಧನದಿಂದ ತೆರವಾದ ಆರ್ ಕೆ ನಗರಕ್ಕೆ ಈಗ ಎರಡನೇ ಬಾರಿ ಉಪ ಚುನಾವಣೆ ನಿಗದಿಯಾಗಿದೆ. ಈ ಹಿಂದೆ ಮತದಾರರಿಗೆ ಭಾರಿ ಪ್ರಮಾಣದಲ್ಲಿ ಹಣ ಹಂಚಲಾಗಿದೆ ಎಂಬ ಕಾರಣಕ್ಕೆ ಚುನಾವಣಾ ಆಯೋಗ ಉಪ ಚುನಾವಣೆಯನ್ನೇ ರದ್ದುಗೊಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com