ಡಿ.05 ರಂದು ಸುಪ್ರೀಂ ಕೋರ್ಟ್ ನಲ್ಲಿ ಪ್ರಾರಂಭವಾದ ವಿಚಾರಣೆಯ ವೇಳೆ ಕಪಿಲ್ ಸಿಬಲ್ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದ ಅಂತಿಮ ತೀರ್ಪನ್ನು 2019 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯವರೆಗೆ ಮುಂದೂಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಿಡಿ ಕಾರಿರುವ ಸುನ್ನಿ ವಕ್ಫ್ ಬೋರ್ಡ್ ಕಪಿಲ್ ಸಿಬಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹೌದು ಕಪಿಲ್ ಸಿಬಲ್ ನಮ್ಮನ್ನು ಪ್ರತಿನಿಧಿಸುವ ವಕೀಲರು ಆದರೆ ಅವರು ರಾಜಕೀಯ ಪಕ್ಷವನ್ನೂ ಪ್ರತಿನಿಧಿಸುತ್ತಾರೆ. ನೆನ್ನೆ ಅವರು ಸುಪ್ರೀಂ ಕೋರ್ಟ್ ಗೆ ನೀಡಿರುವ ಹೇಳಿಕೆ ತಪ್ಪು, ನಮಗೆ ಸಮಸ್ಯೆಗೆ ಶೀಘ್ರ ಪರಿಹಾರ ಬೇಕು ಎಂದು ಸುನ್ನಿ ವಕ್ಫ್ ಬೋರ್ಟ್ ನ ಮುಖ್ಯಸ್ಥ ಹಾಜಿ ಮೆಹಬೂಬ್ ಹೇಳಿದ್ದಾರೆ.